ತೀರ್ಥಹಳ್ಳಿ: ಜೆಜೆಎಂ ಯೋಜನೆ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಟಾಚಾರಕ್ಕೆ ಜೆಜೆಎಂ ಕಾಮಗಾರಿಯ ಪೈಪ್ ಲೈನ್ ಅಳವಡಿಸಲಾಗುತ್ತಿದೆ. ಇದರ ವಿರುದ್ಧ ಪ್ರತಿಭಟನೆ ಅನಿವಾರ್ಯ ಎಂದು ಗ್ರಾಮ ಪಂಚಾಯಿತಿ ಒಕ್ಕೂಟದ ಉಪಾಧ್ಯಕ್ಷ ಯು.ಡಿ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.
‘ಕುಡಿಯುವ ನೀರಿನ ಅಭಾವವಿದ್ದರೂ ಬೋರ್ವೆಲ್ ಕೊರೆಸುತ್ತಿಲ್ಲ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಕರೆ ಮಾಡಿದರೂ, ಸ್ವೀಕರಿಸುವುದಿಲ್ಲ. ತಕ್ಷಣ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ದೋಷ ಸರಿಪಡಿಸದಿದ್ದರೆ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.