ರಿಪ್ಪನ್ ಪೇಟೆ: ಗ್ರಾಮೀಣ ಭಾಗದಲ್ಲಿ ಈಚೆಗೆ ಸುರಿದ ಭಾರಿ ಗಾಳಿ ಮಳೆಗೆ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್.ಕುನ್ನೂರು ಗ್ರಾಮದ ಗೋಪಮ್ಮ ಅವರ ಅಡಿಕೆ ತೋಟದಲ್ಲಿ ಸುಮಾರು 50ಕ್ಕೂ ಅಡಿಕೆ ಮರಗಳು ಧರೆಗುರುಳಿವೆ.
ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ದೇವೇಂದ್ರಪ್ಪಗೌಡರ ಅಡಿಕೆ ತೋಟದಲ್ಲಿಯೂ ಗಾಳಿಮಳೆಗೆ ನೂರಾರು ಅಡಿಕೆ ಮರ ಹಾಗೂ ಬಾಳೆ ಗಿಡಗಳು ಸಂಪೂರ್ಣವಾಗಿ ನೆಲಕಚ್ಚಿವೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
ರಿಪ್ಪನ್ ಪೇಟೆ– ಸಾಗರ ರಸ್ತೆಯ ಹೊಂಡ ಶೋರೂಮ್ಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.