ಶಿಕಾರಿಪುರ: ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಳೆ ಹಾನಿಯಿಂದ ರೈತರು ಕಂಗಲಾಗಿದ್ದಾರೆ.
ನಿರಂತರವಾಗಿ ಮಳೆಯಿಂದ ತಾಲ್ಲೂಕಿನ ಹಲವೆಡೆ ಜಮೀನುಗಳಲ್ಲಿ ನೀರು ನಿಂತಿದೆ. ಮೆಕ್ಕೆಜೋಳ ಬೆಳೆ ಹಾನಿಯಾಗಿದ್ದು, ರೈತರು ಆತಂಕಗೊಂಡಿದ್ದಾರೆ.
ತರಲಗಟ್ಟ ಗ್ರಾಮ ಸಮೀಪದ ಕೆರೆ ತುಂಬಿ ಹರಿದ ಪರಿಣಾಮ ಅಡಿಕೆ ತೋಟ ಹಾಗೂ ಭತ್ತದ ಜಮೀನು ಜಲಾವೃತವಾಗಿದೆ. ತಾಲ್ಲೂಕಿನ ಈಸೂರು ಗ್ರಾಮ ಸಮೀಪದ ಕೆರೆ ಏರಿ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಪಟ್ಟಣದ ಆಶ್ರಯ ಬಡಾವಣೆ ಸಮೀಪದ ಕೃಷಿ ಭೂಮಿಯಲ್ಲೂ ಮಳೆ ನೀರು ನಿಂತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.