ತೀರ್ಥಹಳ್ಳಿ: ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ ₹ 15,000 ದಂಡ ವಿಧಿಸಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.
ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಸಂಬಂಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಕಾರ್ಯಚರಣೆಯಲ್ಲಿ ಪಿಎಸ್ಐ ರಂಗನಾಥ ಅಂತರಗಟ್ಟಿ, ಎಎಸ್ಐ ಉಮೇಶ್ ನಾಯ್ಕ್, ಸಿಬ್ಬಂದಿ ಸುನೀಲ್ ಕನ್ನಂಗಿ, ಅನಿಲ್ ಯಡೂರು, ಗಣೇಶ್ ಆಗುಂಬೆ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.