ADVERTISEMENT

ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಯತ್ನ ಆರೋಪ: ಆರೋಪಿ ಕಾಲಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 3:27 IST
Last Updated 9 ಜುಲೈ 2024, 3:27 IST
   

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ಗಾಂಜಾ ಮಾರಾಟ, ಕೊಲೆ ಯತ್ನದ ಆರೋಪಿಯ ಕಾಲಿಗೆ ಹೊಳೆಹೊನ್ನೂರು ಠಾಣೆ ಇನ್ ಸ್ಪೆಕ್ಟರ್ ಮಂಗಳಾವಾರ ಗುಂಡು ಹೊಡೆದಿದ್ದಾರೆ.

ರಜಾಕ್ ಗುಂಡೇಟು ಹೊಡೆದು ಬಂಧಿಸಲಾದ ಆರೋಪಿ.

ಗಾಂಜಾ ಮಾರಾಟ, ಕೊಲೆ ಯತ್ನ ಸೇರಿದಂತೆ ಐದು ಪ್ರಕರಣಗಳು ರಜಾಕ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.

ADVERTISEMENT

ವಿನೋಬ ನಗರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಅರ್ಜುನ್ ಎಂಬ ಕಾನ್ ಸ್ಟೆಬಲ್ ಮೇಲೆ ರಜಾಕ್ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ ಇನ್ ಸ್ಪೆಕ್ಟೆರ್ ಅರ್ಜುನ್ ನಂತರ ಕಾಲಿಗೆ ಗುಂಡು ಹೊಡೆದಿದ್ದಾರೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನ್ ಸ್ಟೆಬಲ್ ಅರ್ಜುನ್ ಕೂಡ ಗಾಯಗೊಂಡಿದ್ದು ಅವರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಆರೋಪಿ ಕಾಲಿಗೆ ಗುಂಡೇಟು ಪ್ರಕರಣ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.