ADVERTISEMENT

ಶಿರಾ: ಮರದ ಕೊಂಬೆ ಬಿದ್ದು ದ್ವಿಚಕ್ರ ವಾಹನ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 12:50 IST
Last Updated 3 ಅಕ್ಟೋಬರ್ 2024, 12:50 IST
<div class="paragraphs"><p>ರೇವಣ್ಣ</p></div>

ರೇವಣ್ಣ

   

ಶಿರಾ: ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಗುರುವಾರ ದ್ವಿಚಕ್ರ ವಾಹನ ಸವಾರನ ಮೇಲೆ ಮರದ ಕೊಂಬೆ ಬಿದ್ದು ರೇವಣ್ಣ (65) ಎಂಬುವರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಸಾಳಾಪುರ ಗ್ರಾಮದ ನಿವಾಸಿಯಾಗಿದ್ದು, ರಾಮಲಿಂಗಾಪುರ ಗ್ರಾಮ ಪಂಚಾಯಿತಿ ಸದಸ್ಯೆ ಯಶೋದಮ್ಮ ಪತಿ. ಬುಕ್ಕಾಪಟ್ಟಣದಿಂದ ಸಾಳಾಪುರ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹೊಸಪಾಳ್ಯ ಗ್ರಾಮದ ಬಳಿ ಮುಖ್ಯ ರಸ್ತೆಯ ಬದಿಯಲ್ಲಿ ಒಣಗಿದ್ದ ದೊಡ್ಡ ಮರದ ಕೊಂಬೆ ತಲೆಯ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.