ADVERTISEMENT

ಗೌರವ ಡಾಕ್ಟರೇಟ್ ಬೇಡವೆಂದ ಸುದೀಪ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2024, 16:40 IST
Last Updated 6 ಆಗಸ್ಟ್ 2024, 16:40 IST
ಕಿಚ್ಚ ಸುದೀಪ್
ಕಿಚ್ಚ ಸುದೀಪ್   

ತುಮಕೂರು: ಚಲನಚಿತ್ರ ನಟ ಸುದೀಪ್ ಅವರಿಗೆ ತುಮಕೂರು ವಿ.ವಿ ಗೌರವ ಡಾಕ್ಟರೇಟ್ ನೀಡಲು ಮುಂದಾದರೂ ಗೌರವದಿಂದ ಬೇಡವೆಂದಿದ್ದಾರೆ.

ಗೌರವ ಡಾಕ್ಟರೇಟ್ ನೀಡಲು ಪರಿಗಣಿಸುವುದಾಗಿ ಮಾಹಿತಿ ನೀಡಿದಾಗ ಸುದೀಪ್ ಒಪ್ಪಿಕೊಂಡಿಲ್ಲ. ‘ನನಗಿಂತ ದೊಡ್ಡವರು, ಉತ್ತಮ ಕೆಲಸ ಮಾಡಿದವರನ್ನು ಪರಿಗಣಿಸಿ’ ಎಂದು ಹೇಳುವ ಮೂಲಕ ಗೌರವ ತೋರಿಸಿದ್ದಾರೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯ ಈ ಬಾರಿ ಸ್ವಾಮೀಜಿ ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ.

ADVERTISEMENT

ಜಿಲ್ಲೆಯವರಾದ ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಕ್ರೀಡಾಪಟು ಎಸ್.ಸಿ.ನಾಗಾನಂದಸ್ವಾಮಿ ಹಾಗೂ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಗೌರವ ಡಾಕ್ಟರ್‌ಗೆ ಆಯ್ಕೆ ಮಾಡಲಾಗಿದೆ.

ವಿ.ವಿ ಆವರಣದಲ್ಲಿ ಆ. 7ರಂದು ನಡೆಯುವ 17ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.