ತುಮಕೂರು: ಹಾಸನದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರು ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿರುವುದು ಆಘಾತಕಾರಿ ಸಂಗತಿ. ಸರ್ಕಾರ ಈ ಪ್ರಕರಣದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಎಐಎಂಎಸ್ಎಸ್ ಒತ್ತಾಯಿಸಿದೆ.
ಲೈಂಗಿಕ ದೌರ್ಜನ್ಯ ವೆಸಗಿದ ವಿಡಿಯೊ ಇರುವ ಪೆನ್ಡ್ರೈವ್ಗಳನ್ನು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಾಡಿದ್ದಾರೆ ಎಂದು ತಿಳಿದು ಬಂದಿದೆ. ಇದು ರಾಜ್ಯದಲ್ಲಿಯೇ ತಲ್ಲಣ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಎಐಎಂಎಸ್ಎಸ್ ರಾಜ್ಯ ಕಾರ್ಯದರ್ಶಿ ಶೋಭಾ ಶಿವಲಿಂಗಯ್ಯ, ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ವಿ.ಕಲ್ಯಾಣಿ ಆಗ್ರಹಿಸಿದ್ದಾರೆ.
ಪ್ರಕರಣದ ಸಂತ್ರಸ್ತರ ರಕ್ಷಣೆ ಹಾಗೂ ಆರೈಕೆಗೆ ಶೀಘ್ರವೇ ಕ್ರಮಕೈಗೊಳ್ಳಬೇಕು. ಕೆಲವು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ ಮಾಹಿತಿಯೂ ಇದೆ. ಸರ್ಕಾರ ಕೂಡಲೇ ಸಂತ್ರಸ್ತ ಮಹಿಳೆಯರಿಗೆ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.