ADVERTISEMENT

ಕುಣಿಗಲ್ | ರಸ್ತೆ ವಿಭಜಕಕ್ಕೆ ಆಂಬುಲೆನ್ಸ್‌ ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:33 IST
Last Updated 2 ಜುಲೈ 2024, 14:33 IST
<div class="paragraphs"><p>ಅಪಘಾತ –ಪ್ರಾತಿನಿಧಿಕ ಚಿತ್ರ</p></div>

ಅಪಘಾತ –ಪ್ರಾತಿನಿಧಿಕ ಚಿತ್ರ

   

ಕುಣಿಗಲ್: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಸಿಂಗೋನಹಳ್ಳಿ ಅಗ್ರಹಾರ ಗೇಟ್ ಬಳಿ ಮಂಗಳವಾರ ಬೆಂಗಳೂರಿನಿಂದ ಮಂಗಳೂರಿಗೆ ಶವ ಸಾಗಿಸಿ, ಹಿಂತಿರುಗಿ ಬರುತ್ತಿದ್ದ ತುರ್ತು ಚಿಕಿತ್ಸಾ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಚಾಲಕ ಮುಳಬಾಗಿಲಿನ ಶ್ರೀಕಾಂತ (26) ಮೃತಪಟ್ಟಿದ್ದಾರೆ.

ಶ್ರೀಕಾಂತ ಸೋಮವಾರ ಬೆಂಗಳೂರಿನ ಇಂದಿರಾ ನಗರದ ಸಿ.ವಿ.ರಾಮನ್ ಆಸ್ಪತ್ರೆಯಿಂದ ಶವವನ್ನು ಮಂಗಳೂರಿಗೆ ತಲುಪಿಸಿ, ಹಿಂತಿರುತ್ತಿದ್ದಾಗ ಅಪಘಾತ ನಡೆದಿದೆ. ಜತೆಯಲ್ಲಿದ್ದ ಮತ್ತೊಬ್ಬ ಚಾಲಕ ವೆಂಕಟೇಶ ಗಾಯಗೊಂಡಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.