ಕೊಡಿಗೇನಹಳ್ಳಿ: ಪುರವರ ಹೋಬಳಿ ಕೊಂಡವಾಡಿ ಗ್ರಾಮದಲ್ಲಿನ ಚೌಡೇಶ್ವರಿ ದೇವಸ್ಥಾನಕ್ಕೆ ಸೋಮವಾರ ನಟ ಅರ್ಜುನ್ ಸರ್ಜಾ ಮತ್ತು ಅವರ ಕುಟುಂಬ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿದರು.
ಇತ್ತೀಚೆಗೆ ಮದುವೆಯಾಗಿದ್ದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಅಳಿಯ ಉಮಾಪತಿ ರಾಮಯ್ಯ ಅವರೊಂದಿಗೆ ಮನೆದೇವರರಾದ ಕೊಂಡವಾಡಿ ಚೌಡೇಶ್ವರಿದೇವಿ ದರ್ಶನ ಪಡೆದರು. ನಟ ದ್ರುವ ಸರ್ಜಾ ಜೊತೆಗಿದ್ದರು.
ತುಮಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.