ಕುಣಿಗಲ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆ ಅಡಿ ಬಂಧಿಸಲಾಗಿರುವ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ದೇಗುಲ ಮಠದ ಬಾಲಮಂಜುನಾಥ ಸ್ವಾಮಿ ಸಹಚರ ಮನೋಜ್ ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸಾಕ್ಷಿ ನಾಶಕ್ಕೆ ಯತ್ನಿಸಿದ ಆರೋಪದ ಆತನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ಸಂಬಂಧಿಯನ್ನು ಸಂಪರ್ಕಿಸಿ, ದೂರು ಹಿಂಪಡೆಯುವಂತೆ ಒತ್ತಾಯಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.