ಹುಳಿಯಾರು: ಹೋಬಳಿಯ ಯಳನಡು ಸಮೀಪ ಭಾನುವಾರ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಿಂಗಾಪುರ ಗ್ರಾಮದ ಕೆಂಪರಾಜು (28) ಹಾಗೂ ಕಿರಣ್ಬಾಬು (22) ಮೃತಪಟ್ಟಿದ್ದಾರೆ.
ಬೈಕ್ ಸವಾರರು ಹುಳಿಯಾರಿನಿಂದ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಯಳನಡು ಕಡೆಯಿಂದ ಬರುತ್ತಿದ್ದ ಹೊಸದುರ್ಗ- ಬೆಂಗಳೂರು ಕೆಎಸ್ಆರ್ಟಿಸಿ ಬಸ್ ವೇಗವಾಗಿ ಹೋಗಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.