ಗುಬ್ಬಿ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಕ್ರಾಸ್ ಬಳಿ ಭಾನುವಾರ ಕಾರು ಮತ್ತು ಸರಕು ಸಾಗಣೆ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಗುಬ್ಬಿ ಪಟ್ಟಣದ ದಂಪತಿ ಮೃತಪಟ್ಟಿದ್ದಾರೆ.
ಸಿದ್ದಣ್ಣ (65), ಪತ್ನಿ ಶೀಲ (55) ಮೃತರು. ಕಾರು ಚಲಾಯಿಸುತ್ತಿದ್ದ ಮಗ ಯಶಸ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಸಮೇತ ಮೈಸೂರಿಗೆ ಹೋಗುವಾಗ ಬೆಳ್ಳೂರು ಕ್ರಾಸ್ ಬಳಿ ಎದುರುಗಡೆಯಿಂದ ಬಂದ ಸರಕು ಸಾಗಣೆ ವಾಹನ ಡಿಕ್ಕಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.