ಹುಳಿಯಾರು (ಚಿಕ್ಕನಾಯಕನಹಳ್ಳಿ): ಕಂದಿಕೆರೆ ಹೋಬಳಿಯ ಹನುಮಂತನಹಳ್ಳಿ ಗ್ರಾಮದ ಹೊರ ವಲಯದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲು ಬಡಿದು 20 ಕುರಿ ಸಾವನ್ನಪ್ಪಿವೆ.
ಜಯಣ್ಣ ಎಂಬುವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಮೇಯಿಸಲು ಹೋಗಿದ್ದ ವೇಳೆ ಮಳೆ ಆರಂಭವಾಗಿದೆ. ಕುರಿಗಳು ಹುಣಸೆ ಮರದ ಕೆಳಗೆ ನಿಂತಿರುವಾಗ ಸಿಡಿಲು ಬಡಿದಿದೆ. ಜಯಣ್ಣ ಮತ್ತೊಂದು ಮರದಡಿ ಆಶ್ರಯ ಪಡೆದಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ತಿಮ್ಮನಹಳ್ಳಿ ಪಶು ಚಿಕಿತ್ಸಾಲಯದ ವೈದ್ಯ ಶಾಂತೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.