ADVERTISEMENT

ಮಧುಗಿರಿ | ಮೌಲ್ಯಮಾಪನ ಶಿಕ್ಷಕರ ಮೇಲೆ ಹೆಜ್ಜೇನು ದಾಳಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 12:30 IST
Last Updated 18 ಏಪ್ರಿಲ್ 2024, 12:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಧುಗಿರಿ: ಪಟ್ಟಣದ ಚೇತನ ಆಂಗ್ಲ ಪ್ರೌಢಶಾಲೆಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡುತ್ತಿದ್ದ ಶಿಕ್ಷಕರ ಮೇಲೆ ಹೆಜ್ಜೇನು ದಾಳಿ ಮಾಡಿದೆ.

ಶಿಕ್ಷಕರಾದ ಮಂಜುನಾಥ್ (42), ಮಾರುತೀಶ್ ಕುಮಾರ (35) ಹಾಗೂ ರಾಜಬಾಬು (52) ಗಾಯಗೊಂಡಿದ್ದಾರೆ. ಶಾಲಾ ಕಟ್ಟಡದಲ್ಲಿ ಕಟ್ಟಿದ್ದ ಹೆಜ್ಜೇನು ಹುಳುಗಳು ದಿಢೀರನೆ ದಾಳಿ ಮಾಡಿವೆ. ತಕ್ಷಣ ಶಿಕ್ಷಕರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.