ADVERTISEMENT

ತುಮಕೂರು: ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 4:38 IST
Last Updated 16 ಜೂನ್ 2024, 4:38 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ತುಮಕೂರು: ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಜೂನ್ 17ರಂದು ನಗರಕ್ಕೆ ಬರಲಿದ್ದು, ಜೆಡಿಎಸ್, ಬಿಜೆಪಿ ಮುಖಂಡರು ಒಟ್ಟಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿ ನಂಜಾವಧೂತ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ನಂತರ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ.

ನಗರದ ಬಟವಾಡಿ ವೃತ್ತದಿಂದ ಅಶೋಕ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿವರೆಗೆ ಬೃಹತ್ ರ‍್ಯಾಲಿಯೊಂದಿಗೆ ಕರೆ ತರಲಾಗುತ್ತದೆ. ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿರುವ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರಿಗೆ, ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹ ಪಾಲ್ಗೊಳ್ಳುವರು.

ADVERTISEMENT

ಕುಮಾರಸ್ವಾಮಿ ಅವರನ್ನು ಎರಡೂ ಪಕ್ಷಗಳ ಮುಖಂಡರು ಅಭಿನಂದಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.