ತುಮಕೂರು: ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ನಗರದಲ್ಲಿ ನೆಲೆಸಿರುವ ಲೇಖಕ, ಕವಿ ಎಸ್.ಪಿ.ಪದ್ಮಪ್ರಸಾದ್ ಅವರು ತಮ್ಮ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಫೆ.1 ಹಾಗೂ 2ರಂದು ಶಿವಮೊಗ್ಗದ ಚಾಲುಕ್ಯ ನಗರದಲ್ಲಿ ಇರುವ ಸಾಹಿತ್ಯ ಗ್ರಾಮದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಪದ್ಮಪ್ರಸಾದ್ ಈವರೆಗೆ 106 ಕೃತಿಗಳನ್ನು ಹೊರ ತಂದಿದ್ದಾರೆ. ಜಾನಪದ ಅಕಾಡೆಮಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳು ಸಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.