ADVERTISEMENT

ನಕ್ಸಲ್‌ ಹತ್ಯಾಕಾಂಡ: 5 ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 8 ಜನವರಿ 2024, 14:01 IST
Last Updated 8 ಜನವರಿ 2024, 14:01 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಪಾವಗಡ: ವೆಂಕಟಮ್ಮನಹಳ್ಳಿಯಲ್ಲಿ ಪೊಲೀಸರ ಹತ್ಯಾಕಾಂಡ ಪ್ರಕರಣದಲ್ಲಿ ಬಂಧಿಸಿದ್ದ 5 ಮಂದಿ ಆರೋಪಿಗಳನ್ನು ಸೋಮವಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಆಂಧ್ರದಲ್ಲಿದ್ದ ನಾಗರಾಜು (40), ಧರ್ಮವರಂ ಪದ್ಮ (35), ರಾಮಗಿರಿ ತಲ್ಲಿಮಡುಗು ಬೋಯ ಓಬಳೇಶ್ (40), ರಾಮಮೋಹನ್ (42), ಬೋಯ ಆಂಜನೇಯುಲು (44) ಅವರನ್ನು ಭಾನುವಾರ ಪೊಲೀಸರು ಬಂಧಿಸಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದರು.

ADVERTISEMENT

ಪಟ್ಟಣದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಸೋಮವಾರ ಮಧ್ಯಾಹ್ನ ಬಿಗಿ ಭದ್ರತೆಯೊಂದಿಗೆ ಆರೋಪಿಗಳನ್ನು ಕರೆತರಲಾಯಿತು. ವಿಚಾರಣೆ ನಂತರ ಆರೋಪಿಗಳನ್ನು ಮಧುಗಿರಿ, ಬೆಂಗಳೂರಿನ ಜೈಲಿಗೆ ಕರೆದೊಯ್ಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.