ADVERTISEMENT

ಶಿರಾ: ಅಪಘಾತದಲ್ಲಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 11:04 IST
Last Updated 1 ಡಿಸೆಂಬರ್ 2023, 11:04 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶಿರಾ: ರಾಷ್ಟ್ರೀಯ ಹೆದ್ದಾರಿ-48ರ ಆಂಜನೇಯ ಸ್ವಾಮಿ ದೇವಾಲಯದ ಸಮೀಪ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಕುರಿ ಗೊಬ್ಬರನ್ನು ತುಂಬಿಕೊಂಡು ಗುಬ್ಬಿ ಕಡೆಗೆ ಹೋಗುತ್ತಿದ್ದ ಸಮಯದಲ್ಲಿ ಲಾರಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿಹೊಡೆದು, ಲಾರಿ ಚಾಲಕ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ರಾಯದುರ್ಗ ತಾಲ್ಲೂಕಿನ ಭೂಪಸಂದ್ರ ಗ್ರಾಮದ ಎರ್ರಿಸ್ವಾಮಿ (30) ಹಾಗೂ ಚಂದು (22) ಸಾವನ್ನಪ್ಪಿದ್ದಾರೆ.

ADVERTISEMENT

ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.