ADVERTISEMENT

ತುಮಕೂರು | ಅಪಘಾತ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 19 ಮೇ 2024, 15:55 IST
Last Updated 19 ಮೇ 2024, 15:55 IST

ತುಮಕೂರು: ನಗರದ ಕುಣಿಗಲ್‌ ರಸ್ತೆಯಲ್ಲಿ ಭಾನುವಾರ ಟಿಟಿ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪ್ರವೀಣ್‌ದಾಸ್‌ (35) ಎಂಬುವರು ಮೃತಪಟ್ಟಿದ್ದಾರೆ.

ಪ್ರವೀಣ್‌ ಟಿಪ್ಪು ನಗರದ ನಿವಾಸಿ. ಪೇಟಿಂಗ್‌ ಕೆಲಸ ಮಾಡಿಕೊಂಡಿದ್ದರು. ಕಾಲ್‌ಟ್ಯಾಕ್ಸ್‌ ವೃತ್ತದ ಬಳಿ ರಸ್ತೆ ದಾಟುತ್ತಿರುವಾಗ ನಗರದಿಂದ ಕುಣಿಗಲ್‌ ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಪ್ರವೀಣ್‌ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾಗೆ ಕಳುಹಿಸಲಾಗಿತ್ತು. ವಿಕ್ಟೋರಿಯಾದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT