ADVERTISEMENT

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಶಂಕಿತನಿಗಾಗಿ ತುಮಕೂರಿನಲ್ಲಿ ಶೋಧ

‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 19:56 IST
Last Updated 6 ಮಾರ್ಚ್ 2024, 19:56 IST
<div class="paragraphs"><p>ರಾಮೇಶ್ವರಂ ಕೆಫೆ</p></div>

ರಾಮೇಶ್ವರಂ ಕೆಫೆ

   

ತುಮಕೂರು: ಬೆಂಗಳೂರಿನ ‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಾಗಿ ನಗರದಲ್ಲಿ ಬುಧವಾರ ರಾತ್ರಿ ಪೊಲೀಸರು ಶೋಧ ನಡೆಸಿದರು.

ಬೆಂಗಳೂರಿನಿಂದ ಬಂದಿದ್ದ ಪೊಲೀಸರಿಗೆ ಜಿಲ್ಲೆಯ ಪೊಲೀಸರು ಸಾಥ್ ನೀಡಿದರು. ತುಮಕೂರು ರೈಲು ನಿಲ್ದಾಣ, ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಮಹಾನಗರ ಪಾಲಿಕೆ ಆವರಣ, ಮಂಡಿಪೇಟೆ ಸೇರಿದಂತೆ ನಗರದ ವಿವಿಧೆಡೆಗಳಲ್ಲಿ ಪರಿಶೀಲನೆ ನಡೆಸಿದರು. 28 ವಾಹನಗಳಲ್ಲಿ ತೆರಳಿರುವ ಪೊಲೀಸರು ವಿವಿಧೆಡೆ ಶೋಧ ನಡೆಸಿದರು.

ADVERTISEMENT

ಬಾಂಬ್ ಸ್ಫೋಟದ ಶಂಕಿತ ಆರೋಪಿ ತುಮಕೂರಿನಲ್ಲಿ ಓಡಾಡಿದ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸಿ.ಸಿ ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.