ತುಮಕೂರು: ಹೆಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ತಾಲ್ಲೂಕಿನ ಬಾಣಾವರ ಗೇಟ್ ಬಳಿ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಿದರೆಕಟ್ಟೆ ಗ್ರಾಮದ ರತ್ನಮ್ಮ (45) ಸಾವನ್ನಪ್ಪಿದ್ದು, ಇವರ ಪತಿ ಗಂಗರಾಮಯ್ಯ (56) ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಕಡೆಯಿಂದ ಬಿದರೆಕಟ್ಟೆಗೆ ಹೋಗುವಾಗ ತುಮಕೂರಿನಿಂದ ಕುಣಿಗಲ್ಗೆ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ರತ್ನಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತ– ಸಾವು: ತಾಲ್ಲೂಕಿನ ಕುಂಬಿಪಾಳ್ಯದ ಬಳಿ ಎರಡು ಬೈಕ್ಗಳ ಮಧ್ಯೆ ನಡೆದ ಅಪಘಾತದಲ್ಲಿ ಮಾಗಡಿ ತಾಲ್ಲೂಕಿನ ಶ್ರೀರಂಗಪುರ ಗೊಲ್ಲರಹಟ್ಟಿಯ ರಾಮಚಂದ್ರಪ್ಪ (55) ಮೃತಪಟ್ಟಿದ್ದಾರೆ.
ನಾಗವಲ್ಲಿ ಕಡೆಯಿಂದ ಕೆ.ಜಿ.ಟೆಂಪಲ್ನ ಕಾಳಘಟ್ಟ ದೇವಸ್ಥಾನಕ್ಕೆ ಹೋಗುವಾಗ ಮತ್ತೊಂದು ಬೈಕ್ ಡಿಕ್ಕಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.