ತುಮಕೂರು: ನಗರದ ಶೆಟ್ಟಿಹಳ್ಳಿ ಕೆಳ ಸೇತುವೆ ದುರಸ್ತಿ ಕಾಮಗಾರಿ ಕೈಗೊಂಡಿದ್ದು, 2 ದಿನಗಳ ಕಾಲ ರಸ್ತೆ ಬಂದ್ ಆಗಲಿದೆ.
ಜೂನ್ 29 ಹಾಗೂ 30ರಂದು ಕೆಳಸೇತುವೆಯ ರಸ್ತೆಯ ಸಂಪರ್ಕ ಸ್ಥಗಿತಗೊಳಿಸಿದ್ದು, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಶೆಟ್ಟಿಹಳ್ಳಿ ಮುಖ್ಯರಸ್ತೆ ಮಾರ್ಗವಾಗಿ ಚಲಿಸುವ ವಾಹನ ಸವಾರರು ಉಪ್ಪಾರಹಳ್ಳಿ- ಶೆಟ್ಟಿಹಳ್ಳಿ ಮಾರ್ಗದಲ್ಲಿ ಸಂಚರಿಸಬಹುದು. ಮಾಹಿತಿ ಮಹಾನಗರ ಪಾಲಿಕೆ ಸಹಾಯವಾಣಿ 9449872599 ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.