ಪಾವಗಡ: ತಾಲ್ಲೂಕಿನ ಆರ್ಲಹಳ್ಳಿ ಬಳಿ ಸೋಮವಾರ ದ್ವಿಚಕ್ರ ವಾಹನ ಹಾಗೂ ಬೊಲೆರೊ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತಾಲ್ಲೂಕಿನ ದೇವರಬೆಟ್ಟ ಗ್ರಾಮದ ನವೀನ್ ಕುಮಾರ್ (20) ಮೃತರು. ಹಿಂಬದಿ ಸವಾರ ಪ್ರಶಾಂತ್ ಅವರಿಗೆ ಗಾಯಗಳಾಗಿವೆ. ಪಟ್ಟಣದ ವೈಇಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿಗಳಾದ ನವೀನ್, ಪ್ರಶಾಂತ್ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಬರುವಾಗ ಅಪಘಾತ ನಡೆದಿದೆ. ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.