ADVERTISEMENT

ದೇಗುಲದ ಹುಂಡಿ ಕಳವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:29 IST
Last Updated 7 ಜುಲೈ 2024, 16:29 IST

ತುಮಕೂರು: ನಗರದ ಜಯನಗರ ದಕ್ಷಿಣ ಬಡಾವಣೆಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳಗಿನ ಜಾವ ಹುಂಡಿ ಕಳ್ಳತನವಾಗಿದೆ.

ಕಳೆದ 6 ತಿಂಗಳಿನಿಂದ ಹುಂಡಿಯಲ್ಲಿದ್ದ ಹಣ ಹೊರ ತೆಗೆದಿರಲಿಲ್ಲ. ಮುಖಕ್ಕೆ ಮಾಸ್ಕ್‌ ಹಾಕಿಕೊಂಡಿದ್ದ ಕಳ್ಳರು ದೇಗುಲದ ಗೇಟ್‌ ಮುರಿದು ಒಳನುಗ್ಗಿ ಹುಂಡಿ ಕದ್ದು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯಗಳು ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT