ಗುಬ್ಬಿ (ತುಮಕೂರು): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಹೆಚ್ಚಿಸಲು ಚಿಂತನೆ ನಡೆದಿದೆ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಸುಳಿವು ನೀಡಿದ್ದಾರೆ.
ತಾಲ್ಲೂಕಿನ ಮಣ್ಣೆಮ್ಮ ದೇವಸ್ಥಾನದಲ್ಲಿ ಶನಿವಾರ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ದರ, ವಾಹನ ಬಿಡಿ ಭಾಗಗಳ ಬೆಲೆ ಏರಿಕೆ ಹಾಗೂ ಸಿಬ್ಬಂದಿ ವೇತನ ವೆಚ್ಚದಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟ ಅನುಭವಿಸುತ್ತಿದೆ. ಈ ನಷ್ಟ ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.