ADVERTISEMENT

ಚಿಕ್ಕನಾಯಕನಹಳ್ಳಿ: ವಸತಿ ಶಾಲೆ ಬಳಿ ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 9:52 IST
Last Updated 9 ಆಗಸ್ಟ್ 2024, 9:52 IST
<div class="paragraphs"><p>ಅರಣ್ಯ ಇಲಾಖೆಯ ಬೋನಿನಲ್ಲಿ ಒಂದೂವರೆ ವರ್ಷದ ಚಿರತೆ</p></div>

ಅರಣ್ಯ ಇಲಾಖೆಯ ಬೋನಿನಲ್ಲಿ ಒಂದೂವರೆ ವರ್ಷದ ಚಿರತೆ

   

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಮೇಲನಹಳ್ಳಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ‌ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಬಿದ್ದಿದೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಹಿಂಬದಿಯ ಗುಡ್ಡದ ಬಳಿ ಚಿರತೆ ಓಡಾಡುತ್ತಿರುವ ಬಗ್ಗೆ ‌ಶಾಲೆಯ ಭದ್ರತಾ ಸಿಬ್ಬಂದಿ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯಿಂದ ಬೋನಿಡಲಾಗಿತ್ತು.

ADVERTISEMENT

ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿಂದ ಚಿರತೆಯನ್ನು ಸ್ಥಳಾಂತರಿಸಿದರು. ಚಿರತೆ ವೈದ್ಯಕೀಯ ಪರೀಕ್ಷೆ ನಡೆಸಿ, ನಂತರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.