ಹೆಬ್ರಿ: ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ಡಿಕ್ಕಿಯಾಗಿ ಚಾಲಕ ಹಾಗೂ ಸಹಾಯಕ ಅಪಾಯದಿಂದ ಪಾರಾಗಿದ್ದಾರೆ. ಮುನಿಯಾಲು ಜಂಗಮೇಶ್ವರ ಮಠದ ಕ್ರಾಸ್ ಬಳಿ ಫೆ.13ರಂದು ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರಿಗೆ ತೆರುತ್ತಿದ್ದ ಆಂಬುಲೆನ್ಸ್ನಲ್ಲಿ ಚಾಲಕ ಹಾಗೂ ಸಹಾಯಕ ಮಾತ್ರ ಇದ್ದರು. ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ರಸ್ತೆಯ ಎಡಭಾಗದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಂಬ ತುಂಡಾಗಿದೆ. ಅಪಘಾತವಾದ ನಂತರ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.