ADVERTISEMENT

₹67 ಲಕ್ಷ ವಂಚನೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 6:23 IST
Last Updated 29 ಜೂನ್ 2024, 6:23 IST

ಉಡುಪಿ: ಆನ್‌ಲೈನ್‌ ಮೂಲಕ ಲಾಭದ ಆಮಿಷವೊಡ್ಡಿ ಲಕ್ಷಾಂತರ ಹಣ ವಂಚಿಸಿರುವ ಕುರಿತು ಉಡುಪಿಯ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿನ್ನಿಮೂಲ್ಕಿಯ ಎಫ್.ಇ.ಎ ರೋಡ್ರಿಗಸ್‌ ಎಂಬುವವರಿಗೆ ಅಪರಿಚಿತರು ಸಂದೇಶ ಕಳುಹಿಸಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಆಮಿಷವೊಡ್ಡಿದ್ದರು. ಅದರಂತೆ ರೋಡ್ರಿಗಸ್‌ ಅವರು ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹67,16,000 ಅನ್ನು ವರ್ಗಾವಣೆ ಮಾಡಿದ್ದರು. ಅನಂತರ ಅಪರಿಚಿತರು ಹಣ ವಾಪಸ್‌ ನೀಡದೆ ವಂಚಿಸಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT