ಉಡುಪಿ: ಪುತ್ತೂರು ಗ್ರಾಮದ ಸಂತೆಕಟ್ಟೆ ನವಾಮಿ ಬೇಕರಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಿಂದ ಹಣ ದೋಚಲು ಯತ್ನಿಸಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಎಟಿಎಂನ ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ಹಣವನ್ನು ದೋಚಲು ಯತ್ನಿಸಿದ್ದಾರೆ. ಎಟಿಎಂನ ಒಟಿಸಿ ಲಾಕ್ ಮತ್ತು ಸೆನ್ಸರ್ಗೆ ಹಾನಿಯೆಸಗಿ ನಷ್ಟ ಉಂಟು ಮಾಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.