ಹೆಬ್ರಿ: ತಾಲ್ಲೂಕಿನ ವರಂಗ ಗ್ರಾಮದ ಕೆಲಕಿಲ ಸೇತುವೆ ಬಳಿ ಸೋಮವಾರ ಆಲ್ಟೊ ಕಾರ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.
ಅಜೆಕಾರು ಮರ್ಣೆ ಗ್ರಾಮದ ರವಿ (32), ವಿಶ್ವನಾಥ ಎಂಬುವರು ಬೈಕ್ನಲ್ಲಿ ಹೆಬ್ರಿಯಿಂದ ಅಜೆಕಾರು ಕಡೆಗೆ ಹೋಗುತ್ತಿದ್ದಾಗ ಅಜೆಕಾರು ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಆಲ್ಟೊ ಕಾರ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರರು ರಸ್ತೆಗೆ ಬಿದ್ದಿದ್ದು, ವಿಶ್ವನಾಥ ಅವರ ತಲೆ, ಎದೆ, ಎಡಕಾಲಿಗೆ ಗಂಭಿರ ಗಾಯವಾಗಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಲ್ಲಿ ತೋರಿಸಿದಾಗ ವಿಶ್ವನಾಥ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ರವಿ ಅವರಿಗೆ ತಲೆಗೆ, ಪಾದಕ್ಕೆ ಸಣ್ಣಪುಟ್ಟ ಗಾಯವಾಗಿದೆ.
ಕಾರ್ನಲ್ಲಿ ಪ್ರಯಾಣಿಸುತ್ತಿದ್ದ ತ್ರೇಸಿಯಮ್ಮ ಅವರಿಗೆ ಕಾಲುಗಳಿಗೆ, ಹಣೆಗೆ ಗಾಯವಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.