ADVERTISEMENT

ಕಾಪು ಲೀಲಾಧರ ಶೆಟ್ಟಿ ಪುತ್ರಿಯ ಅಪಹರಣ ಪ್ರಕರಣ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 4:43 IST
Last Updated 18 ಡಿಸೆಂಬರ್ 2023, 4:43 IST
   

ಕಾಪು: ಸಮಾಜ ಸೇವಕ ದಿ.ಲೀಲಾಧರ ಶೆಟ್ಟಿ ಅವರ ಪುತ್ರಿಯ ಅಪಹರಣ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಕಾಪು ಪೊಲೀಸರು ಕಾಸರಗೋಡಿನ ಕುಂಬ್ಳೆಯಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಪುತ್ರಿಯ ಸ್ನೇಹಿತರಾದ ಶಿರ್ವ ನಿವಾಸಿ ಗಿರೀಶ್ (20), ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಜೀಜ್ ಎಂದು ಗುರುತಿಸಲಾಗಿದೆ.

ಲೀಲಾಧರ ಶೆಟ್ಟಿ ಅವರ ದತ್ತು ಪುತ್ರಿ ಡಿ.11 ರಂದು ಮನೆಯಿಂದ ನಾಪತ್ತೆಯಾಗಿದ್ದಳು. ಮಗಳು ನಾಪತ್ತೆಯಾದ ಚಿಂತೆಯಲ್ಲಿ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಮರ್ಯಾದೆಗೆ ಅಂಜಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ADVERTISEMENT

ಅಪಹರಣ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಗಿರೀಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಳಿದ ಮೂವರ ವಿರುದ್ಧ ಅಪಹರಣಕ್ಕೆ ನೆರವು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.