ADVERTISEMENT

ಹಾಲಿಲ್ಲದ ಚಾ ಮಾಡುವುದು ಶಾಸಕರಿಗೆ ಡೊಡ್ಡ ವಿಷಯವಲ್ಲ: ಶುಭದರಾವ್

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 5:41 IST
Last Updated 1 ಜುಲೈ 2024, 5:41 IST

ಕಾರ್ಕಳ : ಹಾಲಿನ ಬೆಲೆ ಏರಿಕೆಯನ್ನು ವಿರೋಧಿಸಿ ಶಾಸಕ ವಿ. ಸುನಿಲ್ ಕುಮಾರ್ ಹಾಲಿಲ್ಲದ ಚಹಾ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದು, ಶಾಸಕರಿಗೆ ಈ ರೀತಿಯ ಪ್ರತಿಭಟನೆ ಸಾಮಾನ್ಯವಾಗಬಹುದು. ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಅವರಿಗೆ ಹಾಲಿಲ್ಲದ ಚಹಾ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿ ರೈತರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ. ಉತ್ಪಾದನೆಯಾದ ಹೆಚ್ಚುವರಿ ಹಾಲನ್ನು ಪ್ಯಾಕೆಟಿಗೆ 50 ಮಿ.ಲೀ ಸೇರಿಸಿ ಮಾರಾಟ ಮಾಡಲಾಗುತ್ತದೆ. ಆ ಹೆಚ್ಚುವರಿ ಹಾಲಿಗೆ ₹2ನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತದೆ. ಇದರಿಂದ ಬೆಲೆ ಏರಿಕೆ ಮಾಡಿದಂತಾಗುವುದಿಲ್ಲ.

ಇದರಿಂದ ಹಾಲು ಉತ್ಪಾದಕರಿಗೆ ಲಾಭದಾಯಕವಾಗಿದೆ. ಇದು ಯಾರಿಗೂ ಹೊರೆಯಾಗಿಲ್ಲ. ಇದನ್ನು ರಾಜ್ಯದ ಮುಖ್ಯಮಂತ್ರಿಯೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅರ್ಥಹೀನವಾಗಿದೆ. ಹಾಲಿನ ಬೆಲೆಯನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ಪ್ರಧಾನಿ ತವರು ಗುಜರಾತಿನಲ್ಲಿ ಅತೀ ಹೆಚ್ಚಿದೆ. ಈ ಕುರಿತು ಬಿಜೆಪಿಯ ಪ್ರತಿಭಟನೆ ಇಲ್ಲವೇ? ಎಂದು ಶುಭದ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.