ADVERTISEMENT

ಉಡುಪಿ | ಮಳೆ ಹಾನಿ: ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 4:11 IST
Last Updated 5 ಜುಲೈ 2024, 4:11 IST
ಲಕ್ಷ್ಮಿ ಹೆಬ್ಬಾಳಕರ್
ಲಕ್ಷ್ಮಿ ಹೆಬ್ಬಾಳಕರ್   

ಉಡುಪಿ: ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿ ಪಡೆದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಪರಿಸ್ಥಿತಿಯ ಕುರಿತು ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಚರ್ಚಿಸಿದರು.

ಜಿಲ್ಲೆಯ ಅಮಾಸೆಬೈಲು ಸೇರಿದಂತೆ ಕೆಲವೆಡೆ ಮಳೆ, ಗಾಳಿಯಿಂದ ಉಂಟಾಗಿರುವ ಹಾನಿಯ ಮಾಹಿತಿ ಪಡೆದರು.

ADVERTISEMENT

ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ ಸಚಿವರು, ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.