ಬ್ರಹ್ಮಾವರ: ತಾಲ್ಲೂಕಿನ ಲಿಟ್ಲ್ರಾಕ್ ಇಂಡಿಯನ್ ಸ್ಕೂಲ್ ವಿದ್ಯಾರ್ಥಿನಿ ಧೃತಿ ಎಸ್. ಗ್ಯಾಲಂಟ್ರಿ ಅವಾರ್ಡ್ಸ್ ಪೋರ್ಟಲ್ ಆಫ್ ಇಂಡಿಯಾ ಆಯೋಜಿಸಿದ್ದ ವೀರಗಾಥಾ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ್ದಾರೆ.
ಸಂತೋಷ್ ಪೂಜಾರಿ, ಪ್ರೀತಿ ಸುವರ್ಣ ದಂಪತಿ ಪುತ್ರಿಯಾಗಿರುವ ಅವರು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ದೇಶದ ಟಾಪ್ 100 ವಿದ್ಯಾರ್ಥಿಗಳಲ್ಲಿ 6ರಿಂದ 8ನೇ ತರಗತಿಯ ಅಡಿಯಲ್ಲಿ ಸ್ಥಾನ ಪಡೆದಿದ್ದು, ಚಿತ್ರಕಲೆಯಲ್ಲಿ ಆಯ್ಕೆಯಾಗಿದ್ದಾರೆ. ಜನವರಿ 25ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.