ಉಡುಪಿ: ಇಲ್ಲಿನ ನಗರಸಭೆಗೆ ಲೋಕಾಯುಕ್ತ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ, ದಾಖಲೆಗಳ ಪರಿಶೀಲನೆ ನಡೆಸಿದೆ.
ದಾಖಲೆ ಪರಿಶೀಲನೆ ವೇಳೆ ಯಾವುದೇ ಅಕ್ರಮಗಳು ಪತ್ತೆಯಾಗಿಲ್ಲ ಮತ್ತು ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಿರಲಿಲ್ಲ ಎಂದು ಕೆ.ಸಿ. ಪ್ರಕಾಶ್ ತಿಳಿಸಿದರು.
ವಾಡಿಕೆಯಂತೆ ಎಲ್ಲಾ ಕಚೇರಿಗಳೂ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಅದರಂತೆ ಭೇಟಿ ನೀಡಲಾಗಿದೆ ಎಂದು ಅವರು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.