ಉಡುಪಿ: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ ಶನಿವಾರವೂ ಮುಂದುವರಿದಿದೆ.
ಶನಿವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ವಿವಿಧೆಡೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನ ಸವಾರರು ಪರದಾಡಿದರು. ಭಾರಿ ಮಳೆಯಿಂದಾಗಿ ಬೆಳಿಗ್ಗೆ ಕೆಲಸಕ್ಕೆ ತೆರಳುವವರಿಗೆ ಕೂಡ ಸಮಸ್ಯೆಯಾಯಿತು.
ಕಾರ್ಕಳ, ಕಾಪು, ಹಿರಿಯಡ್ಕ, ಹೆಬ್ರಿ, ಬ್ರಹ್ಮಾವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಮಳೆ ಸುರಿದಿದೆ.
ಕಾರ್ಕಳದಲ್ಲಿ 8 ಸೆಂ.ಮೀ.,ಕುಂದಾಪುರದಲ್ಲಿ11 ಸೆಂ.ಮೀ., ಬೈಂದೂರಿನಲ್ಲಿ 9 ಸೆಂ.ಮೀ, ಬ್ರಹ್ಮಾವರದಲ್ಲಿ 9 ಸೆಂ.ಮೀ, ಕಾಪುವಿನಲ್ಲಿ 7 ಸೆಂ.ಮೀ., ಹೆಬ್ರಿಯಲ್ಲಿ 10 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.