ಉಡುಪಿ: ಬುಧವಾರ ಹಗಲು ಹಾಗೂ ರಾತ್ರಿ ಸುರಿದ ಭಾರಿ ಮಳೆಗೆ ಉಡುಪಿ ನಗರದ ವಿವಿಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಕಲ್ಸಂಕ ಸಮೀಪದ ಬೈಲಕೆರೆಯ ನಾಲ್ಕು ಮನೆಗಳಿಗೆ ನೆರೆ ನೀರು ನುಗ್ಗಿದ್ದು, ಅಲ್ಲಿನ ನಿವಾಸಿಗಳನ್ನು ಅಗ್ನಿಶಾಮಕ ದಳದವರು ಬುಧವಾರ ರಾತ್ರಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ.
ಉಡುಪಿ- ಮಲ್ಪೆ ಮುಖ್ಯರಸ್ತೆಯ ಆದಿ ಉಡುಪಿಗೆ ಸಮೀಪ ಒಂದು ಮರ ಐದು ವಿದ್ಯುತ್ ಕಂಬಗಳು ಧರೆಗುರುಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.