ADVERTISEMENT

ಅಬ್ದುಲ್ ರಶೀದ್‌ಗೆ ಬಿ.ಎಚ್‌.ಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 14:55 IST
Last Updated 7 ಮಾರ್ಚ್ 2019, 14:55 IST
ಅಬ್ದುಲ್ ರಶೀದ್
ಅಬ್ದುಲ್ ರಶೀದ್   

ಶಿರಸಿ: ಹಿರಿಯ ಸಾಹಿತಿ ಬಿ.ಎಚ್‌.ಶ್ರೀಧರ ನೆನಪಿನಲ್ಲಿ ನೀಡುವ ಪ್ರತಿಷ್ಠಿತ ಬಿ.ಎಚ್.ಶ್ರೀಧರ ಸಾಹಿತ್ಯ ಪ್ರಶಸ್ತಿಯನ್ನು ಕಥೆಗಾರ ಅಬ್ದುಲ್ ರಶೀದ್ ಅವರಿಗೆ ಘೋಷಿಸಲಾಗಿದೆ. ಪ್ರಶಸ್ತಿಯು ₹ 5000 ನಗದು, ಪ್ರಶಸ್ತಿಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.

ಮೈಸೂರು ಆಕಾಶವಾಣಿ ನಿರ್ವಾಹಕರಾಗಿರುವ ಅವರು, ‘ಕೆಂಡ ಸಂಪಿಗೆ’ ಅಂತರ್ಜಾಲ ಪತ್ರಿಕೆಯ ಗೌರವ ಸಂಪಾದಕರು. ಏಪ್ರಿಲ್ 24ರಂದು ಶಿರಸಿಯಲ್ಲಿ ನಡೆಯುವ ಬಿ.ಎಚ್‌.ಶ್ರೀಧರರ ಜನ್ಮ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಾಹಿತ್ಯ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ಟಿ.ನಾರಾಯಣ ಭಟ್ಟ, ಕಾರ್ಯಾಧ್ಯಕ್ಷ ರಾಜಶೇಖರ ಹೆಬ್ಬಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT