ಶಿರಸಿ : ‘ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರಗೆ ಬಿಜೆಪಿಯಲ್ಲಿ ಇರಲು ಇಷ್ಟವಿಲ್ಲದಿದ್ದರೆ, ರಾಜೀನಾಮೆ ನೀಡಿ ಉಪಚುನಾವಣೆ ಎದುರಿಸಲಿ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ.ಸುನೀಲ್ ಕುಮಾರ್ ಸವಾಲು ಹಾಕಿದರು.
‘ಹೆಬ್ಬಾರಗೆ ಬಿಜೆಪಿ ಎಲ್ಲ ಅವಕಾಶ ನೀಡಿದೆ. ಏಕೆ ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಬಿಜೆಪಿಗೆ ಕಾರ್ಯಕರ್ತರೇ ಶಕ್ತಿಯಾಗಿದ್ದು, ಹೆಬ್ಬಾರಗೆ ಬೇರೆಡೆ ಹೋಗಿ ಗೆಲ್ಲುವ ವಿಶ್ವಾಸವಿದ್ದರೆ ಹೋಗಲಿ‘ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.