ADVERTISEMENT

ಶಿರೂರು ದುರಂತ: ಇಬ್ಬರ ಮೃತದೇಹ ಪತ್ತೆ, ಮೃತರ ಸಂಖ್ಯೆ 6ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 4:51 IST
Last Updated 18 ಜುಲೈ 2024, 4:51 IST
   

ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ನಡೆದ ಅವಘಡದಲ್ಲಿ ಕಣ್ಮರೆಯಾಗಿದ್ದ ಬಾಲಕಿ ಅವಂತಿಕಾ ನಾಯ್ಕ (6) ಮತ್ತು ಟ್ಯಾಂಕರ್ ಚಾಲಕನ ಮೃತದೇಹ ಗಂಗಾವಳಿ ನದಿಯಲ್ಲಿ ಗುರುವಾರ ಬೆಳಗಿನ ಜಾವ ಪತ್ತೆಯಾಗಿದೆ.

ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳದಲ್ಲಿ ದೊರೆತಿದೆ. ಘಟನೆ ನಡೆದ ಸ್ಥಳದ ಸಮೀಪದಲ್ಲಿಯೇ ನದಿಗೆ ಬಿದ್ದಿರುವ ಮಣ್ಣಿನ ರಾಶಿ ಬಳಿ ಚಾಲಕನ ಮೃತದೇಹ ಸಿಕ್ಕಿದೆ.

ಎನ್.ಡಿ.ಆರ್.ಎಫ್ ತಂಡದ ಸದಸ್ಯರು ಕಳೆದ ಎರಡು ದಿನಗಳಿಂದಲೂ ಕಣ್ಮರೆಯಾಗಿದ್ದವರಿಗೆ ಶೋಧ ಕಾರ್ಯ ಕೈಗೊಂಡಿದ್ದರು.

ADVERTISEMENT

ದುರ್ಘಟನೆಯಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದಂತಾಗಿದ್ದು, ಇನ್ನೂ ಸ್ಥಳೀಯ ಮೂವರು ಸೇರಿದಂತೆ ಇನ್ನಷ್ಟು ಜನ ಕಣ್ಮರೆಯಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರೆಸಲಾಗಿದೆ.

ಸಗಡಗೇರಿ ಸಮೀಪದಲ್ಲಿ ನದಿಯಲ್ಲಿ ಸಿಲುಕಿರುವ ಗ್ಯಾಸ್ ಟ್ಯಾಂಕರ್ ಖಾಲಿ ಮಾಡುವ ಕಾರ್ಯಕ್ಕೆ ಸಿದ್ಧತೆ ನಡೆದಿದೆ.

ಶಿರೂರು ದುರಂತ: ರಕ್ಷಣಾ ಕಾರ್ಯಾಚರಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.