ಮುಂಡಗೋಡ: ತಾಲ್ಲೂಕಿನ ಚವಡಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಿ.20ರಂದು ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಪಹಣಿ ತಿದ್ದುಪಡಿ ಕುರಿತು ಕಂದಾಯ ಅದಾಲತ್ ನಡೆಸಲಾಗುವುದು. ಪಿಂಚಣಿ ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕೈಗೊಳ್ಳುವ ಉದ್ದೇಶದಿಂದ ಅದಾಲತ್ ಆಯೋಜಿಸಲಾಗಿದೆ.
ಹೊಸ ಪಿಂಚಣಿದಾರರಿಗೆ ಪಿಂಚಣಿ ಮಂಜೂರು ಮಾಡುವುದಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ಶಂಕರ ಗೌಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.