ಭಟ್ಕಳ: ತಾಲ್ಲೂಕು ಹಿಂದೂ ಸಂಘಟನೆಯ ಕಾರ್ಯಕರ್ತ ಹನುಮಾನ ನಗರದ ಶ್ರೀನಿವಾಸ ಮಾಸ್ತಪ್ಪ ನಾಯ್ಕ ಅವರಿಗೆ ಜಿಲ್ಲಾಧಿಕಾರಿ ಅವರು ನೀಡಿದ 1ವರ್ಷ ಗಡಿಪಾರು ಮಾಡುವ ನೋಟಿಸ್ಗೆ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಶ್ರೀನಿವಾಸ ನಾಯ್ಕ ಅವರ ಪರ ವಕೀಲ ನಾಗರಾಜ ನಾಯ್ಕ ಅವರು ವಾದ ಮಂಡಿಸಿ ಗಡಿಪಾರು ಪ್ರಕರಣಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಶ್ರೀನಿವಾಸ ನಾಯ್ಕರಿಗೆ ಜಿಲ್ಲಾಡಳಿತ ಈಚೆಗೆ ನೋಟಿಸ್ ಜಾರಿ ಮಾಡಿ 1 ವರ್ಷದ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದರ ವಿರುದ್ಧ ಶ್ರೀನಿವಾಸ ನಾಯ್ಕ ಅವರು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬುಧವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.