ಯಲ್ಲಾಪುರ: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನ್ನಡ ಶಿಕ್ಷಕಿ ಪವಿತ್ರಾ ರಾಮಚಂದ್ರ ಅಗೇರ್ ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘ ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.20ರಂದು ಗಾಂಧಿ ಜಯಂತಿ ಪ್ರಯುಕ್ತ ಬೆಳಗಾವಿಯ ಕನ್ನಡ ಭವನದಲ್ಲಿ ನಡೆಯುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಅವರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಲೇಖಕಿಯಾಗಿಯೂ ಗುರುತಿಸಿಕೊಂಡಿರುವ ಪವಿತ್ರಾ ಅವರ ಅನೇಕ ಕಥೆ, ಚುಟುಕು, ನಾಟಕಕ್ಕೆ ಬಹುಮಾನ ಬಂದಿದೆ. ನಿರೂಪಕಿಯಾಗಿಯೂ ಗಮನ ಸೆಳೆದಿರುವ ಇವರು ಕನ್ನಡ ಭಾಷಾ ಮೇಳವನ್ನು ಸಂಘಟಿಸಿ ಭಾಷೆಯ ಬೆಳವಣಿಗೆಗೂ ಪ್ರಯತ್ನಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.