ADVERTISEMENT

ಬೆಳಗಾವಿ | ವಾಯುವಿಹಾರಿ ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 15:21 IST
Last Updated 19 ಸೆಪ್ಟೆಂಬರ್ 2024, 15:21 IST

ಬೆಳಗಾವಿ: ಮುಂಜಾವಿನಲ್ಲಿ ವಾಯು ವಿಹಾರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರು ಬುಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಇಲ್ಲಿನ ಮಹಾತ್ಮಫುಲೆ ರಸ್ತೆಯ ಹುಳಬತ್ತೆ ಕಾಲೊನಿ ಕ್ರಾಸ್‌ನಲ್ಲಿ ಗುರುವಾರ ಸಂಭವಿಸಿದೆ.

ಎಸ್‌ಪಿಎಂ ರಸ್ತೆಯ ನಿವಾಸಿ ಶ್ರೀಧರ ದಿಲೀಪ ಪವಾರ(43) ಮೃತರು. ‘ಎಂದಿನಂತೆ ಶ್ರೀಧರ ವಾಯುವಿಹಾರಕ್ಕೆ ತೆರಳಿದ್ದರು. ಆಗ ವೇಗವಾಗಿ ಬಂದ ಬುಲೆರೊ ವಾಹನವು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು’ ಎಂದು ಸಂಚಾರ ದಕ್ಷಿಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT