ADVERTISEMENT

ಕಾರು ಅಪಘಾತ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 13:09 IST
Last Updated 29 ಫೆಬ್ರುವರಿ 2024, 13:09 IST

ಕೂಡ್ಲಿಗಿ: ತಾಲ್ಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕೇರಳ ಮೂಲದ ಉನ್ನಿ ಕೃಷ್ಣನ್ (25) ಹಾಗೂ ಪ್ರಜೀತ್ (35) ಮೃತರು.

ಸಹ ಪ್ರಯಾಣಿಕರಾದ ಧೀರು ಮತ್ತು ಅಜೀತ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬಳ್ಳಾರಿಯ ವಿಮ್ಸ್‌ಗೆ ಕಳಿಸಲಾಗಿದೆ. ಇವರು ಕೇರಳದಿಂದ ಪೂನಾ ಕಡೆ ಹೊರಟಿದ್ದರು.

ADVERTISEMENT

ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.