ADVERTISEMENT

ವಿಜಯನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 7 ಜೂನ್ 2024, 7:52 IST
Last Updated 7 ಜೂನ್ 2024, 7:52 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ತುಳಸಿ (8) ಮೃತ ಬಾಲಕಿ, ಸ್ಥಳೀಯ ಪಾಥಮಿಕ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದಳು. ವಿದ್ಯುತ್ ಕಂಬಕ್ಕೆ ಹಾಕಿದ್ದ ಗೈ ತಂತಿಗೆ ಕೈ ತಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಸ್ಥಳಕ್ಕೆ ಕಾನಹೊಸಹಳ್ಳಿ ಪಿಎಸ್ಐ ಎರಿಯಪ್ಪ ಅಂಗಡಿ, ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ADVERTISEMENT

ಗ್ರಾಮಸ್ಥರು ಕೆಲಹೊತ್ತು ಜೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು, ಬಾಲಕಿಯರು ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.