ADVERTISEMENT

ಮಳೆ– ಗಾಳಿಗೆ ನೆಲಕ್ಕೊರಗಿದ ಭತ್ತ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 14:57 IST
Last Updated 22 ಅಕ್ಟೋಬರ್ 2024, 14:57 IST
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ಮಳೆಗಾಳಿಯಿಂದ ಭತ್ತ ನೆಲಕ್ಕೊರಗಿರುವುದು
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ಮಳೆಗಾಳಿಯಿಂದ ಭತ್ತ ನೆಲಕ್ಕೊರಗಿರುವುದು   

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಬಾಚಿಗೊಂಡನಹಳ್ಳಿಯಲ್ಲಿ ಮಳೆಯಿಂದಾಗಿ 15 ಎಕರೆ ಭತ್ತ ನೆಲಕ್ಕೊರಗಿದೆ ಎಂದು ಗ್ರಾಮ ಆಡಳಿತಾಧಿಕಾರಿ ಯಂಕಾರೆಡ್ಡಿ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಸೋಮವಾರ ತಡರಾತ್ರಿ ಸುರಿದ ಗಾಳಿ ಮಳೆಯಿಂದಾಗಿ ಭತ್ತ ನೆಲಕ್ಕೊರಗಿದ್ದು 15ಕ್ಕೂ ಹೆಚ್ಚು ರೈತರ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಮಾಹಿತಿ ನೀಡಿದರು. ಸ್ಥಳಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು. ಸರ್ಕಾರಕ್ಕೆ ನಷ್ಟದ ವರದಿ ನೀಡುವುದಾಗಿ ತಿಳಿಸಿದರು.

ತಾಲ್ಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿಯೂ ಮಳೆ- ಗಾಳಿಯಿಂದಾಗಿ ಭತ್ತ ನೆಲಕ್ಕೊರಗಿದೆ ಎಂದು ಗ್ರಾಮ ಆಡಳಿತಾಧಿಕಾರಿ ದೇವೇಂದ್ರಪ್ಪ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.