ADVERTISEMENT

ಹೊಸಪೇಟೆ | ತುಂಗಭದ್ರಾ ಜಲಾಶಯ: ಒಳಹರಿವು ಪ್ರಮಾಣದಲ್ಲಿ ಏರಿಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 15:43 IST
Last Updated 6 ಜೂನ್ 2024, 15:43 IST
ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಗುರುವಾರ ಸಂಜೆ ಬಿರುಸಿನ ಮಳೆ ಸುರಿದಾಗ ಬೈಕ್‌ ಸವಾರರೊಬ್ಬರು ಸಂಚರಿಸಿದ ಪರಿ  –ಪ್ರಜಾವಾಣಿ ಚಿತ್ರ
ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಗುರುವಾರ ಸಂಜೆ ಬಿರುಸಿನ ಮಳೆ ಸುರಿದಾಗ ಬೈಕ್‌ ಸವಾರರೊಬ್ಬರು ಸಂಚರಿಸಿದ ಪರಿ  –ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆ ಆಗಿದ್ದು, ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಗುರುವಾರ ಸಂಜೆ ಬಿರುಸಿನ ಮಳೆ ಸುರಿಯಿತು. ಜಲಾನಯನ ಪ್ರದೇಶಗಳಲ್ಲಿ ಮಳೆ ಆಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆ ಉಂಟಾಗಿದೆ.

ಗುರುವಾರ ಜಲಾಶಯದ ಒಳಹರಿವಿನ ಪ್ರಮಾಣ 1,670 ಕ್ಯೂಸೆಕ್‌ನಷ್ಟಿತ್ತು. 105.78 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 3.63 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT