ADVERTISEMENT

ವಿಜಯನಗರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ಸಾವು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 13:01 IST
Last Updated 8 ಅಕ್ಟೋಬರ್ 2024, 13:01 IST
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು   

ಕಾನಹೊಸಹಳ್ಳಿ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಕುಮತಿ ಗ್ರಾಮದ ಸಾಗರ (14), ಗುರು (14), ವಿನಯ (11) ಮೃತ ಬಾಲಕರು‌. ಇವರೆಲ್ಲ ಎಂಟನೇ ತರಗತಿ ವಿದ್ಯಾರ್ಥಿಗಳು. ಇಬ್ಬರು ಒಡಹುಟ್ಟಿದವರಾಗಿದ್ದರೆ, ಇನ್ನೊಬ್ಬ ಬಾಲಕ ಅವರ ಗೆಳೆಯ ಎಂದು ಹೇಳಲಾಗಿದೆ.

ಬಾಲಕರ ಕುಟುಂಬದ ಅಕ್ರಂದನ‌ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.